ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.
Cross references
ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.
ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು.
ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--
ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.