ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
Cross references
ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು.
ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.
ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.
ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು.
ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
ಆಗ ಇಸ್ರಾಯೇಲ್ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು.
ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.