ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.
Cross references
ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.
ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು.
ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.
ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.
ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
ನಾವು ನಮ್ಮ ನೀರನ್ನು ಹಣ ಕೊಟ್ಟು ಕುಡಿದಿದ್ದೇವೆ, ನಮ್ಮ ಸೌದೆಯು ನಮಗೆ ಮಾರಲ್ಪಟ್ಟಿದೆ.
ಅಡವಿ ಕತ್ತಿಯ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.