ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
Cross references
ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು.
ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.
ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
ಚೀಯೋನ್ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ.
ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃ ಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.
ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.