ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
Cross references
ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು.
ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ
ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.
ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?