ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.
Cross references
ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.
ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು.
ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;