ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.
Cross references
ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.
ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.
ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.
ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ
ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು.
ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.