Home Bibles ನ್ಯಾಯಾಧಿಪತಿಗಳು 7:20 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 7:20 · ಕನ್ನಡ ಬೈಬಲ್

ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.

Cross references

ಅಂಕೆಗಳ ಪುಸ್ತಕ 10:1

ಕರ್ತನು ಮೋಶೆಗೆ ಹೇಳಿದ್ದೇನೆಂದರೆ

ಯೆಹೋಶುವ 6:4

ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.

ಯೆಹೋಶುವ 6:16

ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.

ಯೆಹೋಶುವ 6:20

ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.

ಯೆಶಾಯ 27:13

ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.

1 ಕೊರಿಂಥದವರಿಗೆ 15:52

ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.

2 ಕೊರಿಂಥದವರಿಗೆ 4:7

ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.

1 ತೆಸಲೋನಿಕದವರಿಗೆ 4:16

ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;

ಹೆಬ್ರಿಯರಿಗೆ 11:4

ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.

2 ಪೇತ್ರ 1:15

ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.

Interlinear

Choose Theme