ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
Cross references
ಕರ್ತನು ಮೋಶೆಗೆ ಹೇಳಿದ್ದೇನೆಂದರೆ
ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.