ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
Cross references
ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.
ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.
ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.
ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.