ಅದೇ ರಾತ್ರಿಯಲ್ಲಿ ಆದದ್ದೇನಂದರೆ, ಕರ್ತನು ಅವನಿಗೆ--ನೀನು ಎದ್ದು ದಂಡಿಗೆ ಇಳಿದು ಹೋಗು; ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
Cross references
ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ
ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--