ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.
Cross references
ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.
ಇಗೋ, ಇಸ್ರಾಯೇಲ್ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.
ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.ಆದರೆ ಇಸ್ರಾ ಯೇಲ್ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು.
ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?