ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
Cross references
ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.
ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.
ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.
ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.
ಇನ್ನೂ ಇಸ್ರಾಯೇಲ್ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.
ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.
ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು.
ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.