ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.
Cross references
ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು.
ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋ ನಿನ ವರೆಗೂ ಫಿಲಿಷ್ಟಿಯರನ್ನು ಸದೆಬಡಿದದರಿಂದ ಅವರು ಬಹಳವಾಗಿ ದಣಿದುಹೋದರು.
ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು.
ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು