ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು.
Cross references
ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.
ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.
ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.
ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.