ಅದನ್ನು ಶೆಕೆಮಿನ ಗೋಪುರ ದಲ್ಲಿದ್ದ ಜನರೆಲ್ಲರೂ ಕೇಳಿದಾಗ ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಪ್ರವೇಶಿಸಿದರು.
Cross references
ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.
ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.
ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.
ಈಗ ಓ ಇಸ್ರಾಯೇಲಿನ ದೇವರೇ, ನನ್ನ ತಂದೆಯಾದ ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ದೃಢವಾಗಲಿ.
ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.
ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.