ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.
Cross references
ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು.
ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.
ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.