ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
Cross references
ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.
ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.
ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.