ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.
Cross references
ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು.
ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ.
ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.
ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
ಆಗ ಆತನು ನನಗೆ--ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ನಿನಗೆ ಕೊಟ್ಟಿದ್ದೇನೆ; ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು ಅಂದನು.
ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.