ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.
Cross references
ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
ನನ್ನ ಕರುಳುಗಳು ಸುಮ್ಮನಿರದೆ ಬೇಯುತ್ತವೆ. ಸಂಕಟಗಳ ದಿವಸಗಳು ನನಗೆ ಮುಂಗೊಂಡವು.
ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.
ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.
ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ.
ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.
ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.