ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.
Cross references
ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
ನಮ್ಮ ಕುತ್ತಿಗೆಗಳು ಹಿಂಸೆಗೊಳ ಗಾದವು; ನಾವು ವಿಶ್ರಾಂತಿಯಿಲ್ಲದೆ ಕಷ್ಟಪಡುತ್ತೇವೆ.
ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.