ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
Cross references
ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು.
ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.
ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.
ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.