ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
Cross references
ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ.
ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು.
ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.
ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.