ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
Cross references
ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.
ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ.
ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.
ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು.ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.