ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.
Cross references
ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು.
ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.