ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
Cross references
ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.
ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ.
ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
ಓ ಕರ್ತನೇ, ನೀನು ನನ್ನ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯವನ್ನು ತೀರಿಸು.
ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?