Cross references
ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.
ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ?
ಆದರೆ ಮರುದಿನದಲ್ಲಿ ಇಸ್ರಾಯೇಲ್ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.
ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.
ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.
ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.