Home Bibles ವಿಲಾಪಗಳು 3:39 · ಕನ್ನಡ ಬೈಬಲ್
ವಿಲಾಪಗಳು 3:39 · ಕನ್ನಡ ಬೈಬಲ್

ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ?

Cross references

ಆದಿಕಾಂಡ 4:5

ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.

ಆದಿಕಾಂಡ 4:13

ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.

ಲೇವ್ಯಕಾಂಡ 26:41

ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ

ಲೇವ್ಯಕಾಂಡ 26:43

ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.

ಅಂಕೆಗಳ ಪುಸ್ತಕ 11:11

ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ?

ಅಂಕೆಗಳ ಪುಸ್ತಕ 16:41

ಆದರೆ ಮರುದಿನದಲ್ಲಿ ಇಸ್ರಾಯೇಲ್‌ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.

ಅಂಕೆಗಳ ಪುಸ್ತಕ 17:12

ಆಗ ಇಸ್ರಾಯೇಲ್‌ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.

ಯೆಹೋಶುವ 7:6

ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.

2 ಸಮುವೇಲ 6:7

ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.

2 ಅರಸುಗಳು 3:13

ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.

2 ಅರಸುಗಳು 6:32

ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.

2 ಅರಸುಗಳು 6:33

ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.

ಎಜ್ರಾ 9:13

ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ

ಯೋಬ 11:6

ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.

ಯೋಬ 15:13

ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.

ಸಾಮೇತಿಗಳು 19:3

ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.

ಯೆಶಾಯ 38:17

ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.

ಯೆಶಾಯ 51:20

ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.

ಯೆರೆಮಿಯ 10:19

ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.

ಯೆರೆಮಿಯ 30:15

ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;

ವಿಲಾಪಗಳು 3:22

ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.

ಯೋನ 2:3

ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.

ಯೋನ 4:8

ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.

ಮೀಕ 7:9

ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.

ಹೆಬ್ರಿಯರಿಗೆ 12:5

ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;

ಪ್ರಕಟನೆ 16:9

ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.

Interlinear

Choose Theme