ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.
Cross references
ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು.
ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.
ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.
ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.
ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.