ಓ ಕರ್ತನೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡಿಸಿ ನನ್ನ ಜೀವವನ್ನು ವಿಮೋಚಿಸಿದ್ದೀ.
Cross references
ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.
ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.