ಓ ಕರ್ತನೇ, ನೀನು ನನ್ನ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯವನ್ನು ತೀರಿಸು.
Cross references
ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು.
ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.
ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.
ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ--
ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
ಅವರ ಎಲ್ಲಾ ಪ್ರತೀಕಾರವನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನೀನು ನೋಡಿರುವಿ.
ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.