ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
Cross references
ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.
ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,
ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ.
ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು.
ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.