ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
Cross references
ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು.
ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು.
ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ
ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.