ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
Cross references
ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು.
ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.
ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.
ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.
ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.
ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು;
ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಅವನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಜ್ಞವೇದಿಯನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.
ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?
ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.