ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು.
Cross references
ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು.
ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.
ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.
ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.
ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.
ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.
ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು.
ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.
ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ.
ಕೋರಹನೂ ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು
ಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ
ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.