Home Bibles ಲೇವ್ಯಕಾಂಡ 10:1 · ಕನ್ನಡ ಬೈಬಲ್
ಲೇವ್ಯಕಾಂಡ 10:1 · ಕನ್ನಡ ಬೈಬಲ್

ಇದಲ್ಲದೆ ಆರೋನನ ಕುಮಾರರಾದ ನಾದಾಬ್‌ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು.

Cross references

ನಿರ್ಗಮಕಾಂಡ 6:23

ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್‌ ಅಬೀಹೂ ಎಲ್ಲಾಜಾರ್‌ ಈತಾಮಾರ್‌ ಇವರನ್ನು ಹೆತ್ತಳು.

ನಿರ್ಗಮಕಾಂಡ 8:27

ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು.

ನಿರ್ಗಮಕಾಂಡ 24:1

ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.

ನಿರ್ಗಮಕಾಂಡ 24:9

ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.

ನಿರ್ಗಮಕಾಂಡ 27:3

ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.

ನಿರ್ಗಮಕಾಂಡ 28:1

ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್‌ ಅಬೀಹೂ ಎಲಿಯೇಜರ್‌ ಈತಾಮಾರ್‌ ಎಂಬವರನ್ನೂ ಇಸ್ರಾಯೇಲ್‌ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.

ನಿರ್ಗಮಕಾಂಡ 30:1

ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.

ನಿರ್ಗಮಕಾಂಡ 30:9

ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.

ನಿರ್ಗಮಕಾಂಡ 30:34

ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.

ನಿರ್ಗಮಕಾಂಡ 31:11

ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.

ನಿರ್ಗಮಕಾಂಡ 37:29

ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.

ನಿರ್ಗಮಕಾಂಡ 38:3

ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.

ನಿರ್ಗಮಕಾಂಡ 40:27

ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.

ಲೇವ್ಯಕಾಂಡ 9:24

ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.

ಲೇವ್ಯಕಾಂಡ 16:1

ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು.

ಲೇವ್ಯಕಾಂಡ 16:12

ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.

ಲೇವ್ಯಕಾಂಡ 22:9

ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

ಅಂಕೆಗಳ ಪುಸ್ತಕ 3:2

ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.

ಅಂಕೆಗಳ ಪುಸ್ತಕ 3:4

ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.

ಅಂಕೆಗಳ ಪುಸ್ತಕ 4:18

ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ.

ಅಂಕೆಗಳ ಪುಸ್ತಕ 16:6

ಕೋರಹನೂ ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು

ಅಂಕೆಗಳ ಪುಸ್ತಕ 16:16

ಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು

ಅಂಕೆಗಳ ಪುಸ್ತಕ 16:46

ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.

ಅಂಕೆಗಳ ಪುಸ್ತಕ 26:61

ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.

ದ್ವಿತೀಯೋಪದೇಶಕಾಂಡ 4:2

ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.

ದ್ವಿತೀಯೋಪದೇಶಕಾಂಡ 12:32

ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.

ದ್ವಿತೀಯೋಪದೇಶಕಾಂಡ 17:3

ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ

1 ಅರಸುಗಳು 13:1

ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.

2 ದಿನವೃತ್ತಾಂತ 26:16

ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.

ಕೀರ್ತನೆಗಳು 141:2

ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.

ಯೆರೆಮಿಯ 19:5

ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.

ಲೂಕ 1:9

ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.

ಹೆಬ್ರಿಯರಿಗೆ 9:4

ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;

ಪ್ರಕಟನೆ 8:3

ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.

Interlinear

Choose Theme