ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
Cross references
ಇಸ್ರಾಯೇಲ್ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.
ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
ಕರ್ತನು ಮೋಶೆಯೊಂದಿಗೆ ಮಾತನಾಡಿ--
ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.
ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.
ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು.
ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.