ಆಗ ಆರೋನನು ಮೋಶೆಗೆ--ಇಗೋ, ಈ ದಿನ ಅವರು ಅಪರಾಧದ ಬಲಿಯನ್ನೂ ಅದರ ದಹನಬಲಿಯನ್ನೂ ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದ್ದಾಗ್ಯೂ ಇಂಥವುಗಳು ನನಗೆ ಸಂಭವಿಸಿದವು. ಇಂದು ನಾನು ಆ ಪಾಪದ ಬಲಿಯನ್ನು ತಿಂದರೆ ಅದು ಕರ್ತನ ದೃಷ್ಟಿಯಲ್ಲಿ ಅಂಗೀಕಾರ ವಾಗುವದೋ ಅಂದನು.ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.
Cross references
ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.
ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.
ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.