Home Bibles ಲೇವ್ಯಕಾಂಡ 10:19 · ಕನ್ನಡ ಬೈಬಲ್
ಲೇವ್ಯಕಾಂಡ 10:19 · ಕನ್ನಡ ಬೈಬಲ್

ಆಗ ಆರೋನನು ಮೋಶೆಗೆ--ಇಗೋ, ಈ ದಿನ ಅವರು ಅಪರಾಧದ ಬಲಿಯನ್ನೂ ಅದರ ದಹನಬಲಿಯನ್ನೂ ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದ್ದಾಗ್ಯೂ ಇಂಥವುಗಳು ನನಗೆ ಸಂಭವಿಸಿದವು. ಇಂದು ನಾನು ಆ ಪಾಪದ ಬಲಿಯನ್ನು ತಿಂದರೆ ಅದು ಕರ್ತನ ದೃಷ್ಟಿಯಲ್ಲಿ ಅಂಗೀಕಾರ ವಾಗುವದೋ ಅಂದನು.ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.

Cross references

ಲೇವ್ಯಕಾಂಡ 9:8

ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.

ಲೇವ್ಯಕಾಂಡ 9:12

ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.

ದ್ವಿತೀಯೋಪದೇಶಕಾಂಡ 12:7

ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.

ದ್ವಿತೀಯೋಪದೇಶಕಾಂಡ 26:14

ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.

1 ಸಮುವೇಲ 1:7

ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.

ಯೆಶಾಯ 1:11

ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.

ಯೆಶಾಯ 1:15

ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.

ಯೆರೆಮಿಯ 6:20

ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.

ಯೆರೆಮಿಯ 14:12

ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?

ಹೊಶೇಯ 9:4

ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.

ಮಲಾಕಿ 1:10

ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.

ಮಲಾಕಿ 1:13

ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮಲಾಕಿ 2:13

ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.

ಫಿಲಿಪ್ಪಿಯವರಿಗೆ 4:4

ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.

ಹೆಬ್ರಿಯರಿಗೆ 7:27

ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.

ಹೆಬ್ರಿಯರಿಗೆ 9:8

ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.

Interlinear

Choose Theme