ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
Cross references
ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ಮೋಶೆಯು ಹೇಳಿದ ಹಾಗೆಯೇ ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು.
ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು.
ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.
ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.
ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು.
ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು.
ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.
ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.
ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.