ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
Cross references
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.
ಆಗ ಕರ್ತನು ಅವನಿಗೆ--ನೀನು ಇಳಿದು ಹೋಗಿ ಆರೋನ ನನ್ನು ಕರಕೊಂಡು ಇಲ್ಲಿಗೆ ಬಾ. ಆದರೆ ಕರ್ತನು ಅವರನ್ನು ಸಾಯಿಸದಂತೆ ಯಾಜಕರೂ ಜನರೂ ಮುಂದೆ ಕರ್ತನ ಬಳಿಗೆ ಬಾರದೆ ಇರಲಿ ಅಂದನು.ಹೀಗೆ ಮೋಶೆಯು ಜನರ ಬಳಿಗೆ ಇಳಿದುಹೋಗಿ ಅವರೊಂದಿಗೆ ಮಾತನಾಡಿದನು.
ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.
ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.
ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು.
ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ
ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ.
ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?