ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
Cross references
ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು.
ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು;
ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
ಯಾಜಕನು ಆ ಸ್ತ್ರೀಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಿ ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು ಅವಳ ಕೈಗಳಲ್ಲಿ ರೋಷದ ಕಾಣಿಕೆಯಾಗಿರುವ ಜ್ಞಾಪಕದ ಕಾಣಿಕೆಯನ್ನು ಇಡಬೇಕು. ಆದರೆ ಯಾಜಕನ ಕೈಯಲ್ಲಿ ಶಪಿಸುವಂತ ಕಹಿಯಾದ ನೀರು ಇರಬೇಕು.
ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು.
ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು
ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
ಆದರೆ ಮರುದಿನದಲ್ಲಿ ಇಸ್ರಾಯೇಲ್ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.
ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
ಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್ ಬೆಟ್ಟಕ್ಕೆ ಕರಕೊಂಡು ಬಂದು.
ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.
ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
ಇವನು ಅಬೀಷೂವನ ಮಗನು, ಇವನು ಫೀನೆಹಾಸನ ಮಗನು, ಇವನು ಎಲ್ಲಾಜಾರನ ಮಗನು, ಇವನು ಪ್ರಧಾನ ಯಾಜಕ ನಾದ ಆರೋನನ ಮಗನು.
ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.