ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು.
Cross references
ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು;
ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ
ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು.
ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು.