ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
Cross references
ಇದಲ್ಲದೆ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?
ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.
ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು.
ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು.
ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.