ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.
Cross references
ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು.
ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು.
ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.
ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.
ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು
ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.
ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ.