ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
Cross references
ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.
ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು.
ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು.
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.