Cross references
ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.
ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು.
ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.
ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.
ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.
ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ
ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.
ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;