ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
Cross references
ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು.
ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು.
ಆಗ ಯಾಜಕನು ಅದನ್ನು ಗಮನಿಸಬೇಕು; ಇಗೋ, ಕುಷ್ಠವು ಅವನ ಮೈಯೆಲ್ಲವನ್ನು ಹರಡಿಕೊಂಡು ಶುದ್ಧನಾಗಿ ರುವನೆಂದು ಯಾಜಕನು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವದರಿಂದ ಅವನು ಶುದ್ಧನಾಗಿರು ವನೆಂದು
ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ.
ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.
ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.
ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.