ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
Cross references
ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು.
ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು.
ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು.
ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.
ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.
ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.
ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.