ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.
Cross references
ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.
ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.
ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ.
ಕರ್ತನು ನನಗೆ ಹೇಳಿದ್ದೇ ನಂದರೆ--ಮನುಷ್ಯಪುತ್ರನೇ, ಕರ್ತನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನ್ಯಾಯ ಪ್ರಮಾಣದ ವಿಷಯವಾಗಿಯೂ ನಾನು ನಿನಗೆ ಹೇಳುವದನ್ನೆಲ್ಲಾ ನೀವು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನದಟ್ಟು ಮಾಡಿಕೋ; ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾದು ಹೋಗುವವುಗಳನ್ನೂ ಗಮನಿಸು.
ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ